July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ಈ ಸಾಲಿನಲ್ಲಿ ಸುಮಾರು ರೂ. 605 ಕೋಟಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಗೆ ವಿತರಿಸುವ ಐತಿಹಾಸಿಕ ಕಾರ್ಯಕ್ರಮ ನ.14ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು.

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.


ವೇದಿಕೆಯಲ್ಲಿ ಜ್ಞಾನ ವಿಕಾಸ ಕಾಯ೯ಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಧನ್ಯ ಶ್ರೀ ಸಂಘ ಬೆಳ್ತಂಗಡಿ, ಶ್ರೀ ನಿಧಿ ಸಂಘ ಕುಂದಾಪುರ, ಶ್ರೀ ಶಂಕರ ಸಂಘ ಹೊಸಪೇಟೆ, ಅಪೂರ್ವ ಸಂಘ ಆನೇಕಲ್, ಅಹಮದ್ ಸಂಘ ಖಾನಾಪುರ, ರೋಶನ್ ಸಂಘ ಹಾಸನ ಇವರಿಗೆ ಸಾಂಕೇತಿಕವಾಗಿ ಸಚಿವರು ಲಾಭಾಂಶ ವಿತರಿಸಿದರು.
ಕಾರ್ಯಕ್ರಮದಲ್ಲಿ ಡಿ.ಸುರೇಂದ್ರ ಕುಮಾರ್, ಸುಪ್ರಿಯ ಹರ್ಷೇಂದ್ರ ಕುಮಾರ್, ಪೂರಣ್ ವಮ೯, ಸೋನಿಯಾ ವಮ೯, ಅಭಯಚಂದ್ರ ಜೈನ್ ಸೇರಿದಂತೆ ಯೋಜನೆಯ ಅಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ್ ಪೈ, ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ, ದುಗ್ಗೇ ಗೌಡ, ವಿವೇಕ್ ವಿನ್ಸೆಂಟ್ ಪಾಯಸ್ ಸಚಿವರು ಹಾಗೂ ಅತಿಥಿಗಳನ್ನು ಗೌರವಿಸಿದರು.

ನಿನಾದ ಸಂಗೀತ ಶಾಲೆ ಧಮ೯ಸ್ಥಳದ ಸಾನ್ವಿ, ಇಷ್ಟ, ಶ್ರಾವಣಿ ಇವರ ಪ್ರಾಥ೯ನೆ ಬಳಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯ ಅಭಿವೃದ್ಧಿ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ ಧನ್ಯವಾದ ವಿತ್ತರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!