July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಇತರ ಪ್ರಾಣಿಗಳಿಗೆ ಹೋಲಿಸಿದಲ್ಲಿ ಮಾನವರಲ್ಲಿ ಬಾಲ್ಯವು ದೀರ್ಘಕಾಲದ್ದಾಗಿದ್ದು ಬಾಲ್ಯದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ತಂದೆ ತಾಯಿಯರನ್ನು ಹಿರಿಯರನ್ನು ಗೌರವಿಸುವುದನ್ನು ಮಕ್ಕಳು ಕಲಿಯಬೇಕು ಎಂದು ಕಲ್ಮಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಬಿ ಎಡ್ ಪ್ರಶಿಕ್ಷಣಾರ್ಥಿ ರಕ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರಿಣಾಕ್ಷಿ ಸ್ವಾಗತಿಸಿ ಶಶಿಕಲಾ ಧನ್ಯವಾದವಿತ್ತರು. ಸಂತೋಷ್ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿಯರಾದ ಮಾಲಿನಿ ಹೆಗಡೆˌ ಹೇಮಲತಾˌ ಪ್ರೇಮಲತಾˌ ಸವಿತಾˌ ಸಾವಿತ್ರಿ ಸಿ ಡಿ ˌವಸಂತಿ ಎಂ ಸುಧೀಂದ್ರ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!