25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

ನಾರಾವಿ: ಕಳೆದ ರಾತ್ರಿ ಸುರಿದ ಸಿಡಿಲು ಮಳೆಗೆ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದು ಮನೆಯವರು ಅಪಾಯದಿಂದ ಪಾರಾದ ಘಟನೆ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.14ರಂದು ನಡೆದಿದೆ.

ನಿನ್ನೆ ಒಂದೆ ಸಮನೆ ಸುರಿದ ಮಳೆ ಹಾಗೂ ಸಿಡಿಲಿಗೆ ನಾರಾವಿ ವೈಶಾಲಿ ಪರಿಸರದ ನಾರಾಯಣ ಬಂಗೇರ ಅವರ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದಿದೆ. ಮನೆಯಲ್ಲಿ ತಾಯಿ ಮಗಳು ಮಾತ್ರವಿದ್ದು ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ರಭಸಕ್ಕೆ ಮನೆಯ ಗೋಡೆ ಬಿರುಕು ಬಿದ್ದಿದೆ. ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಕರಕಲಾಗಿದೆ. ತೋಟಕ್ಕೂ ಹಾನಿಯಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇಗಾಗಲೇ ಪಂಚಾಯತ್ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್. ಸುಧಾಕರ ಭಂಡಾರಿ, ಪ್ರಮುಖರಾದ ಉದಯ ಹೆಗ್ಡೆ, ಶ್ರೀನಿವಾಸ್ ಕಿಣಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya
error: Content is protected !!