ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ಉಜಿರೆ: ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ 2024 ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16 ಮತ್ತು 17 ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ತಿಳಿಸಿದ್ದಾರೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಯೂತ್ ಕಾರ್ನಿವಾಲ್ ಉದ್ಘಾಟಿಸಲಿದ್ದಾರೆ.

ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಆದ ರೊ. ವಿಕ್ರಂದತ್ತ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳೂ ಭಾಗವಹಿಸಲಿದ್ದಾರೆ.

ಯೂತ್ ಕಾರ್ನಿವಾಲ್ ಆಕರ್ಷಣೆಗಳು: ಯೂತ್ ಕಾರ್ನಿವಾಲ್ ಪ್ರಯುಕ್ತ ನವೆಂಬರ್ 16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಲಿದೆ. ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆಯೂ ಇರಲಿದೆ. ಅಂತೆಯೇ ಯೂತ್ ಕಾರ್ನಿವಾಲ್ ಪ್ರಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೋ. ಸಂದೇಶ್ ರಾವ್ (ಮೊ: 9632133669) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related posts

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya
error: Content is protected !!