22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಮಾರ್ಗದರ್ಶನದಲ್ಲಿ ಶಾಲೆಯ ಪುಟಾಣಿ ಮಕ್ಕಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜವಾಹರಲಾಲ್ ನೆಹರು ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದ ಬಳಿಕ ಶಿಕ್ಷಕ ವೃಂದದಿಂದ ಹಾಗೂ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಮನೋರಂಜನೆಯನ್ನು ನೀಡಲಾಯಿತು.

ಬಹುಮಾನ ವಿತರಣಾ ಸಮಾರಂಭದ ವೇದಿಕೆಯ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಸೈಯದ್ ಅಯ್ಯುಬ್ ಮಾತನಾಡಿ ” ತಮ್ಮ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಬೇಕೆಂದು ಬಯಸಿದ ನೆಹರು ಇವರ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕೆಂದರು. ಕೋಶಾಧಿಕಾರಿ ಸೈಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಶಾಲಾ ಸಹಶಿಕ್ಷಕಿ ಮಿಶ್ರಿಯ ಸ್ವಾಗತಿಸಿದರು. ಸಹ ಶಿಕ್ಷಕಿ ಶಮೀಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಸಲ್ಮಾ ಧನ್ಯವಾದವಿತ್ತರು.

Related posts

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!