July 29, 2026
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!