24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಉದ್ಯಮಿ ಎ.ಸಿ. ಕುರಿಯನ್ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನ.14 ರಂದು ಪ್ರಕರಣ ದಾಖಲಾಗಿದೆ.


ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನ.13ರಂದು ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಮನೆಯನ್ನು ಅಧಿಕಾರಿಗಳು ತೆರವುಗೊಳಿಸಿದ ಘಟನೆಯ ಬಳಿಕ ವೃದ್ಧ ದಂಪತಿಯ ಪುತ್ರಿ ಆರೋಪ ಮಾಡಿದ್ದು, ಇದೀಗ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.


ಶಿಬಾಜೆ ಗ್ರಾಮದ ಅಕೋಟೇಜಲ್ ಎಂಬಲ್ಲಿ ಎ.ಸಿ. ಕುರಿಯನ್ ಮನೆಯಲ್ಲಿ ಮಹಿಳೆ ಹಿಂದೆ ಕೆಲಸ ಮಾಡುತ್ತಿದ್ದು, ಈ ವೇಳೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಮಹಿಳೆಯು ತನ್ನ ಪತಿಯೊಂದಿಗೆ ಕುರಿಯನ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಯ ವಾಸಕ್ಕೆ ಕುರಿಯನ್ ಮನೆ ನೀಡಿದ್ದರು. ಈ ವೇಳೆ ತಾನಿದ್ದ ಕೊಠಡಿಗೆ ಚಹಾ, ತಿಂಡಿ ತರಲು ಹೇಳುತ್ತಿದ್ದ ಕುರಿಯನ್, ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. 2020ರ ಜನವರಿ 1ರಿಂದ ಡಿಸೆಂಬರ್ 31ರ ನಡುವೆ ಘಟನೆ ನಡೆದಿದ್ದು, ನಾಲ್ಕು ವರ್ಷಗಳ ಬಳಿಕ ಇದೀಗ ನ.14ರಂದು ದೂರು ನೀಡಲಾಗಿದೆ. ಮಾನಕ್ಕೆ ಅಂಜಿ ತಡವಾಗಿ ದೂರು ದಾಖಲಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.


ಲೈಂಗಿಕ ಕಿರುಕುಳ ನೀಡಿದ್ದರಿಂದ ನೊಂದಿದ್ದ ಮಹಿಳೆ ಕೆಲಸ ಬಿಟ್ಟಿದ್ದರು. ಆಗ ಕುರಿಯನ್, ಈ ಭೂಮಿಯಲ್ಲಿ ಇರಲು ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದರು. ಮಹಿಳೆಯ ಹೆತ್ತವರು ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಸರ್ವೇ ನಂಬರ್ 123ರಲ್ಲಿ ಮನೆ ನಿರ್ಮಿಸಿ ವಾಸವಿದ್ದರು. ನ.13ರಂದು ಕಡಬ ತಹಶೀಲ್ದಾರ್, ಕಡಬ ಮೆಸ್ಕಾಂ ಎಇ, ಕಂದಾಯ ನಿರೀಕ್ಷಕರು, ಜೆಸಿಬಿ ಚಾಲಕ ಮುಂತಾದವರು ಸೇರಿ ಜೆಸಿಬಿ ಮುಖಾಂತರ ಪೊಲೀಸರ ಸಮ್ಮುಖದಲ್ಲಿ ಮನೆಯಲ್ಲಿ ಧ್ವಂಸಗೊಳಿಸಿದ್ದಾರೆ. ನನ್ನ ವಿರುದ್ಧದ ದ್ವೇಷದ ಕಾರಣ ನನ್ನ ತಂದೆ – ತಾಯಿಯ ಮನೆ ಧ್ವಂಸ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!