38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಇತರ ಪ್ರಾಣಿಗಳಿಗೆ ಹೋಲಿಸಿದಲ್ಲಿ ಮಾನವರಲ್ಲಿ ಬಾಲ್ಯವು ದೀರ್ಘಕಾಲದ್ದಾಗಿದ್ದು ಬಾಲ್ಯದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ತಂದೆ ತಾಯಿಯರನ್ನು ಹಿರಿಯರನ್ನು ಗೌರವಿಸುವುದನ್ನು ಮಕ್ಕಳು ಕಲಿಯಬೇಕು ಎಂದು ಕಲ್ಮಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಬಿ ಎಡ್ ಪ್ರಶಿಕ್ಷಣಾರ್ಥಿ ರಕ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರಿಣಾಕ್ಷಿ ಸ್ವಾಗತಿಸಿ ಶಶಿಕಲಾ ಧನ್ಯವಾದವಿತ್ತರು. ಸಂತೋಷ್ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿಯರಾದ ಮಾಲಿನಿ ಹೆಗಡೆˌ ಹೇಮಲತಾˌ ಪ್ರೇಮಲತಾˌ ಸವಿತಾˌ ಸಾವಿತ್ರಿ ಸಿ ಡಿ ˌವಸಂತಿ ಎಂ ಸುಧೀಂದ್ರ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!