April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಇತರ ಪ್ರಾಣಿಗಳಿಗೆ ಹೋಲಿಸಿದಲ್ಲಿ ಮಾನವರಲ್ಲಿ ಬಾಲ್ಯವು ದೀರ್ಘಕಾಲದ್ದಾಗಿದ್ದು ಬಾಲ್ಯದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ತಂದೆ ತಾಯಿಯರನ್ನು ಹಿರಿಯರನ್ನು ಗೌರವಿಸುವುದನ್ನು ಮಕ್ಕಳು ಕಲಿಯಬೇಕು ಎಂದು ಕಲ್ಮಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಅವರು ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಬಿ ಎಡ್ ಪ್ರಶಿಕ್ಷಣಾರ್ಥಿ ರಕ್ಷಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರಿಣಾಕ್ಷಿ ಸ್ವಾಗತಿಸಿ ಶಶಿಕಲಾ ಧನ್ಯವಾದವಿತ್ತರು. ಸಂತೋಷ್ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿಯರಾದ ಮಾಲಿನಿ ಹೆಗಡೆˌ ಹೇಮಲತಾˌ ಪ್ರೇಮಲತಾˌ ಸವಿತಾˌ ಸಾವಿತ್ರಿ ಸಿ ಡಿ ˌವಸಂತಿ ಎಂ ಸುಧೀಂದ್ರ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya
error: Content is protected !!