25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya
error: Content is protected !!