27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ಉಜಿರೆ: ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ 2024 ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16 ಮತ್ತು 17 ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ತಿಳಿಸಿದ್ದಾರೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಯೂತ್ ಕಾರ್ನಿವಾಲ್ ಉದ್ಘಾಟಿಸಲಿದ್ದಾರೆ.

ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಆದ ರೊ. ವಿಕ್ರಂದತ್ತ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳೂ ಭಾಗವಹಿಸಲಿದ್ದಾರೆ.

ಯೂತ್ ಕಾರ್ನಿವಾಲ್ ಆಕರ್ಷಣೆಗಳು: ಯೂತ್ ಕಾರ್ನಿವಾಲ್ ಪ್ರಯುಕ್ತ ನವೆಂಬರ್ 16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಲಿದೆ. ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆಯೂ ಇರಲಿದೆ. ಅಂತೆಯೇ ಯೂತ್ ಕಾರ್ನಿವಾಲ್ ಪ್ರಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೋ. ಸಂದೇಶ್ ರಾವ್ (ಮೊ: 9632133669) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related posts

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya
error: Content is protected !!