26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ಉಜಿರೆ: ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ 2024 ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16 ಮತ್ತು 17 ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ತಿಳಿಸಿದ್ದಾರೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಯೂತ್ ಕಾರ್ನಿವಾಲ್ ಉದ್ಘಾಟಿಸಲಿದ್ದಾರೆ.

ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಆದ ರೊ. ವಿಕ್ರಂದತ್ತ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳೂ ಭಾಗವಹಿಸಲಿದ್ದಾರೆ.

ಯೂತ್ ಕಾರ್ನಿವಾಲ್ ಆಕರ್ಷಣೆಗಳು: ಯೂತ್ ಕಾರ್ನಿವಾಲ್ ಪ್ರಯುಕ್ತ ನವೆಂಬರ್ 16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಲಿದೆ. ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆಯೂ ಇರಲಿದೆ. ಅಂತೆಯೇ ಯೂತ್ ಕಾರ್ನಿವಾಲ್ ಪ್ರಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೋ. ಸಂದೇಶ್ ರಾವ್ (ಮೊ: 9632133669) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related posts

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya
error: Content is protected !!