April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ ಪಿ.ಎನ್ ವಹಿಸಿದ್ದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ಸುಧಾಮಣಿ ಬಿ ಮತ್ತು ಶ್ರೀಮತಿ ಸವಿತಾ ನಡೆಸಿಕೊಟ್ಟರು.

ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ್ ಕುಮಾರ್ ಇಂಗ್ಲಿಷ್ ಶಿಕ್ಷಕರಾದ ಅನಂತ ಕೃಷ್ಣ ಮತ್ತು ಕನ್ನಡ ಶಿಕ್ಷಕ ಆನಂದ್ ಆಟೋಟಗಳನ್ನು ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಗಾಯತ್ರಿ, ಶ್ರೀಮತಿ ಸಂಧ್ಯಾ ಸಹಕರಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ