25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ. ನ. 14: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಜರಗಿತು.

ಕ್ರೀಡಾಕೂಟವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಿ. ಲಕ್ಷ್ಮಣಗೌಡ ಉದ್ಘಾಟಿಸಿ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಮೂಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯಕವಾಗಿದೆ ಎಂದು ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭವಾನಿ ಮಾರ್ಪಾಲು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕಣಿಕ್ಕಿಲ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕ್ರೀಡಾ ಮಂತ್ರಿ ಕುಮಾರಿ ತೃಪ್ತಿ ಇವರು ಪ್ರತಿಜ್ಞಾ ವಿಧಿ ಬೋಧಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಶ್ರೇಯಾಶ್ರೀ ವಂದಿಸಿದರು. ಶಿಕ್ಷಕ ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya
error: Content is protected !!