September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಬೆಳ್ತಂಗಡಿ ತಾಲೂಕು ಇದರ ಮಹಾಸಭೆಯು ನ.12 ರಂದು ಬೆಳ್ತಂಗಡಿ ಜೆ.ಸಿ ಭವನದಲ್ಲಿ ಅಸೋಸಿಯೇಷನ್ ಅಧ್ಯಕ್ಷೆ ಶಾಂತಾ ಜೆ. ಬಂಗೇರ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು.


ಸಭೆಯನ್ನು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ, ಉಪಾಧ್ಯಕ್ಷೆ ರಶ್ಮಿತಾ ಸ್ವಾಗತಿಸಿದರು. ಕಾರ್ಯದರ್ಶಿ ಸುನಿತಾ ಬಿಜುರವರು ವಾರ್ಷಿಕ ವರದಿ ಒಪ್ಪಿಸಿ, ಕೋಶಾಧಿಕಾರಿ ವಿಶಾಲರವರು ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ನಂತರ ಸಂಘದ ಗ್ರಾಮಾಭಿವೃದ್ಧಿ ಬಗ್ಗೆ ಚರ್ಚೆ ನಡೆದು ಮುಂದಿನ ಕಾರ್ಯಕಾರಣಿ ಸಮಿತಿಯ ಆಯ್ಕೆಯ ಬಗ್ಗೆ ನಿರ್ಣಯಿಸಲಾಯಿತು. ಮುಂದಿನ ಅವಧಿಗೆ ಸದಸ್ಯರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.


ಅಧ್ಯಕ್ಷರಾಗಿ ಬೆಳ್ತಂಗಡಿ ದಿಯಾ ಬ್ಯೂಟಿ ಪಾರ್ಲರ್‌ನ ರಶ್ಮಿತಾ ಆಳ್ವ, ಉಪಾಧ್ಯಕ್ಷರಾಗಿ ಬೆಳ್ತಂಗಡಿ ಸೌಂದರ್ಯ ಬ್ಯೂಟಿ ಪಾರ್ಲರ್‌ನ ಶ್ರೀಮತಿ ವಿದ್ಯಾ, ಕಾರ್ಯದರ್ಶಿಯಾಗಿ ಅಳದಂಗಡಿ ಸತ್ಯಶ್ರೀ ಬ್ಯೂಟಿ ಪಾರ್ಲರ್‌ನ ಶ್ರೀಮತಿ ವಿನುಷಾ, ಕೋಶಾಧಿಕಾರಿಯಾಗಿ ಬೆಳ್ತಂಗಡಿ ಲವ್ಲೀ ಬ್ಯೂಟಿ ಪಾರ್ಲರ್‌ನ ಗ್ರೇಸಿ ಲೋಬೊ, ಜೊತೆ ಕಾರ್ಯದರ್ಶಿಯಾಗಿ ಗುರುವಾಯನಕೆರೆಯ ಸ್ಟ್ಯಾಂಡರ್‍ಡ್ ಬ್ಯೂಟಿ ಪಾರ್ಲರ್‌ನ ಶಕೀಳಾ, ಗೌರವ ಸಲಹೆಗಾರರಾಗಿ ಬೆಳ್ತಂಗಡಿ ಭವಿಷ್ಯ ಬ್ಯೂಟಿ ಪಾರ್ಲರ್‌ನ ಶರ್ಮಿಳಾ ಮೊರಸ್ ಹಾಗೆಯೇ ಉಳಿದ ಕಾರ್ಯಕಾರಣಿ ನಿರ್ದೇಶಕರನ್ನು ಆಯ್ಕೆಮಾಡಲಾಯಿತು.

Related posts

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya
error: Content is protected !!