23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
error: Content is protected !!