25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya
error: Content is protected !!