25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya
error: Content is protected !!