ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!