25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
error: Content is protected !!