July 29, 2026
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!