26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!