23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya
error: Content is protected !!