September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya
error: Content is protected !!