23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ಉಜಿರೆ: ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ 2024 ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16 ಮತ್ತು 17 ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ತಿಳಿಸಿದ್ದಾರೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಯೂತ್ ಕಾರ್ನಿವಾಲ್ ಉದ್ಘಾಟಿಸಲಿದ್ದಾರೆ.

ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಆದ ರೊ. ವಿಕ್ರಂದತ್ತ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳೂ ಭಾಗವಹಿಸಲಿದ್ದಾರೆ.

ಯೂತ್ ಕಾರ್ನಿವಾಲ್ ಆಕರ್ಷಣೆಗಳು: ಯೂತ್ ಕಾರ್ನಿವಾಲ್ ಪ್ರಯುಕ್ತ ನವೆಂಬರ್ 16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಲಿದೆ. ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆಯೂ ಇರಲಿದೆ. ಅಂತೆಯೇ ಯೂತ್ ಕಾರ್ನಿವಾಲ್ ಪ್ರಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೋ. ಸಂದೇಶ್ ರಾವ್ (ಮೊ: 9632133669) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya
error: Content is protected !!