ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ಉಜಿರೆ: ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ 2024 ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16 ಮತ್ತು 17 ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ತಿಳಿಸಿದ್ದಾರೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಯೂತ್ ಕಾರ್ನಿವಾಲ್ ಉದ್ಘಾಟಿಸಲಿದ್ದಾರೆ.

ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಆದ ರೊ. ವಿಕ್ರಂದತ್ತ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳೂ ಭಾಗವಹಿಸಲಿದ್ದಾರೆ.

ಯೂತ್ ಕಾರ್ನಿವಾಲ್ ಆಕರ್ಷಣೆಗಳು: ಯೂತ್ ಕಾರ್ನಿವಾಲ್ ಪ್ರಯುಕ್ತ ನವೆಂಬರ್ 16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಲಿದೆ. ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆಯೂ ಇರಲಿದೆ. ಅಂತೆಯೇ ಯೂತ್ ಕಾರ್ನಿವಾಲ್ ಪ್ರಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೋ. ಸಂದೇಶ್ ರಾವ್ (ಮೊ: 9632133669) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related posts

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!