July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

ನಾರಾವಿ: ಕಳೆದ ರಾತ್ರಿ ಸುರಿದ ಸಿಡಿಲು ಮಳೆಗೆ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದು ಮನೆಯವರು ಅಪಾಯದಿಂದ ಪಾರಾದ ಘಟನೆ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.14ರಂದು ನಡೆದಿದೆ.

ನಿನ್ನೆ ಒಂದೆ ಸಮನೆ ಸುರಿದ ಮಳೆ ಹಾಗೂ ಸಿಡಿಲಿಗೆ ನಾರಾವಿ ವೈಶಾಲಿ ಪರಿಸರದ ನಾರಾಯಣ ಬಂಗೇರ ಅವರ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದಿದೆ. ಮನೆಯಲ್ಲಿ ತಾಯಿ ಮಗಳು ಮಾತ್ರವಿದ್ದು ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ರಭಸಕ್ಕೆ ಮನೆಯ ಗೋಡೆ ಬಿರುಕು ಬಿದ್ದಿದೆ. ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಕರಕಲಾಗಿದೆ. ತೋಟಕ್ಕೂ ಹಾನಿಯಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇಗಾಗಲೇ ಪಂಚಾಯತ್ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್. ಸುಧಾಕರ ಭಂಡಾರಿ, ಪ್ರಮುಖರಾದ ಉದಯ ಹೆಗ್ಡೆ, ಶ್ರೀನಿವಾಸ್ ಕಿಣಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya
error: Content is protected !!