25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

ನಾರಾವಿ: ಕಳೆದ ರಾತ್ರಿ ಸುರಿದ ಸಿಡಿಲು ಮಳೆಗೆ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದು ಮನೆಯವರು ಅಪಾಯದಿಂದ ಪಾರಾದ ಘಟನೆ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.14ರಂದು ನಡೆದಿದೆ.

ನಿನ್ನೆ ಒಂದೆ ಸಮನೆ ಸುರಿದ ಮಳೆ ಹಾಗೂ ಸಿಡಿಲಿಗೆ ನಾರಾವಿ ವೈಶಾಲಿ ಪರಿಸರದ ನಾರಾಯಣ ಬಂಗೇರ ಅವರ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದಿದೆ. ಮನೆಯಲ್ಲಿ ತಾಯಿ ಮಗಳು ಮಾತ್ರವಿದ್ದು ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ರಭಸಕ್ಕೆ ಮನೆಯ ಗೋಡೆ ಬಿರುಕು ಬಿದ್ದಿದೆ. ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಕರಕಲಾಗಿದೆ. ತೋಟಕ್ಕೂ ಹಾನಿಯಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇಗಾಗಲೇ ಪಂಚಾಯತ್ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್. ಸುಧಾಕರ ಭಂಡಾರಿ, ಪ್ರಮುಖರಾದ ಉದಯ ಹೆಗ್ಡೆ, ಶ್ರೀನಿವಾಸ್ ಕಿಣಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!