ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿಡ್ಲೆ : ಇಲ್ಲಿಯ ಬೂಡುಜಾಲು ಸಮೀಪದ ಕೂವೆ ಎಂಬಲ್ಲಿ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾದ ಘಟನೆ ನ.15 ರಂದು ಬೆಳಿಗ್ಗೆ ನಡೆದಿದೆ.

ಸ್ಥಳೀಯರು ನಡೆದುಕೊಂಡು ಹೋಗುವ ವೇಳೆ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾಗಿದ್ದು ಮೃತದೇಹವನ್ನು ಕಂಡು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೊಣಕಾಲಿನ ಕೆಳಭಾಗದಲ್ಲಿ ಕೆಂಪು ಮಿಶ್ರಿತ ಟವಲ (ಬೈರಾಸ)ನ್ನು ಕಟ್ಟಿಕೊಂಡಿರುತ್ತದೆ ಹೊರತು ಯಾವುದೇ ಬಟ್ಟೆಬರೆಗಳು ಇರಲ್ಲಿಲ್ಲ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!