September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ ಪಿ.ಎನ್ ವಹಿಸಿದ್ದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ಸುಧಾಮಣಿ ಬಿ ಮತ್ತು ಶ್ರೀಮತಿ ಸವಿತಾ ನಡೆಸಿಕೊಟ್ಟರು.

ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ್ ಕುಮಾರ್ ಇಂಗ್ಲಿಷ್ ಶಿಕ್ಷಕರಾದ ಅನಂತ ಕೃಷ್ಣ ಮತ್ತು ಕನ್ನಡ ಶಿಕ್ಷಕ ಆನಂದ್ ಆಟೋಟಗಳನ್ನು ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಗಾಯತ್ರಿ, ಶ್ರೀಮತಿ ಸಂಧ್ಯಾ ಸಹಕರಿಸಿದರು.

Related posts

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya
error: Content is protected !!