23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಊರ ಪರ ಊರ ಸಹೃದಯ ಧರ್ಮಾಭಿಮಾನಿ ಸದ್ಧರ್ಮ ಬಂಧುಗಳ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡು ಪಂಚ ಕಲ್ಯಾಣಗೊಂಡ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ. ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಇಂದು ಶುಕ್ರವಾರದಂದು ನೊಂಪಿಯನ್ನು ಆಡಳಿತ ಮಂಡಳಿಯವರ ಸಹಕಾರದೊಂದಿಗೆ ನೆರವೇರಿಸಿದರು

‌ಹತ್ತಾರು ವರ್ಷಗಳ ನಂತರ ಮತ್ತೆ ನಮ್ಮ ಬಸದಿಯಲ್ಲಿ ನೋಂಪಿಯನ್ನು ನೋಡುವ ಸೌಭಾಗ್ಯ ನಮ್ಮದಾಯಿತು. ಭೋಜನದ ವ್ಯವಸ್ಥೆಯನ್ನು ಶ್ರೀಮತಿ ರೇಷ್ಮಾ ಮತ್ತು ಪಣಿರಾಜ್ ಜೈನ್ ವಹಿಸಿಕೊಂಡಿದ್ದರು. ಎಲ್ಲಾ ವ್ಯವಸ್ಥೆಯನ್ನು ಡಾ. ಜಯಕೀರ್ತಿ ಜೈನ್ ಧರ್ಮಸ್ಥಳ ರವರ ನೇತೃತ್ವದಲ್ಲಿ ಸಂತೋಷ್ ಕುಮಾರ್ ವಳಂಬಲ, ಭುವನ್ ಜೈನ ಧರ್ಮಸ್ಥಳ, ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಪಣಿರಾಜ್ ಜೈನ್ ಕೊಕ್ಕಡ ಮುಂತಾದವರು ಸಹಕರಿಸಿದ್ದರು.
ಪುಷ್ಪರಾಜ ಇಂದ್ರ , ಅರಹಂತ ಇಂದ್ರ ನೋಂಪಿ ಪೂಜೆಯನ್ನು ನೆರವೇರಿಸಿದರು.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya
error: Content is protected !!