September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಲಾಯಿತು.


ನ.15ರಂದು ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಕುಸುಮಾವತಿ, ಆಶಾಕಾರ್ಯಕರ್ತೆ ವಿನಯ ಆರ್. ಗೌಡ, ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸುಮಿತ್ರ, ಚಿರಂಜೀವಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಕಾನರ್ಪ, ರಾಘವೇಂದ್ರ ಭಟ್, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.


ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ನೀಡಿ ಸಹಕರಿಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ನಡೆಸಿಕೊಟ್ಟರು.
ಅಂಗನವಾಡಿ ಸಹಾಯಕಿ ವಸಂತಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!