27.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟವನ್ನು ನ.16 ರಂದು ಹಮ್ಮಿಕೊಳ್ಳಲಾಯಿತು.


ಕ್ರೀಡಾಕೂಟವನ್ನು ಮುಂಡಾಜೆಯ ಯಂಗ್ ಚಾಲೆಂಜರ್ಸ್ ನ ಸ್ಥಾಪಕ ಅಧ್ಯಕ್ಷ ನಾಮದೇವ್ ಮುಂಡಾಜೆ ರವರು ಕ್ರೀಡಾ ಧ್ವಜಾರೋಹಣ ನೆರವೇರಿಸುವುದರ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ, ಮನೋ ಧೈರ್ಯ, ಶಾರೀರಿಕ ಬೆಳವಣಿಗೆ ಉತ್ತಮಗೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಇಂತಹ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣಗೊಳ್ಳಲು ಸಹಕಾರಿ ಇದ್ದಂತೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕ್ರೀಡಾಕೂಟದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಸುಜಾತಾ ಧನ್ಯವಾದವಿತ್ತರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ಎನ್ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya
error: Content is protected !!