23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ. 14 ರಂದು ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ವಂ| ಫಾ| ಕ್ಲಿಫರ್ಡ್ ರೊಡ್ರಿಗಸ್ ಆಶಾದೀಪಾ ಮಡಂತ್ಯಾರು ರವರು ಮಕ್ಕಳು ತಮಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದನ್ನು ಕಥೆಯ ಮೂಲಕ ತಿಳಿಸಿದರು.


ಶಾಲಾ ಸಂಚಾಲಕರಾದ ಅತೀ ವಂ| ಫಾ| ವಾಲ್ಟರ್ ಡಿಮೆಲ್ಲೋ ರವರು ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿ ಆಶೀರ್ವದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ಹೇಳಿ ಶುಭ ಹಾರೈಸಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ತಾಲೂಕು ಮಟ್ಟದ ಕ್ರೀಡೆ ಹಾಗೂ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಹಾಗೂ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು. ಶಿಕ್ಷಕ ವೃಂದದವರು ಶುಭಾಶಯ ಗೀತೆ ಹಾಗೂ ನೃತ್ಯಗಳ ಮೂಲಕ ಎಲ್ಲರ ಮನರಂಜಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಲವೀನಾ ಮಿನೇಜಸ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ರೆನಿಟಾ ಲಸ್ರಾದೊ ಸ್ವಾಗತಿಸಿ, ಶ್ರೀಮತಿ ಬ್ಲೆಂಡಿನ್ ರೊಡ್ರಿಗಸ್ ವಂದಿಸಿದರು.

Related posts

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!