July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ ಜೈನ್,ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ಸದಸ್ಯರಾಗಿ ಪ್ರದೀಪ್ ಅವರು ಚುನಾಯಿತರಾಗಿದ್ದಾರೆ.

ಬಹಳಷ್ಟು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಈ ಚುನಾವಣೆಯಲ್ಲಿ 22ಮಂದಿ ನಿರ್ದೇಶಕರು ಮತದಾನ ಮಾಡಿದ್ದರು. ಸಂಜೆ ಮತದಾನದ ಬಳಿಕ ಮತ ಏಣಿಕೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ ಜಯರಾಜ್ ಜೈನ್ 17 ಮತಗಳನ್ನು ಪಡೆದು ಚುನಾಯಿತರಾದರು. ಅವರ ಪ್ರತಿಸ್ಪರ್ಧಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳಂಜ ಅವರಿಗೆ 7 ಮತ ದೊರಕಿ ಅವರು ಸೋಲು ಅನುಭವಿಸಿದರು. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲೋಕೋಪಯೋಗಿ ಇಲಾಖೆಯ ನಾರಾಯಣ ಶೆಟ್ಟಿ 17 ಮತ ಪಡೆದು ಆಯ್ಕೆಯಾದರೆ ಅವರ ಎದುರಾಳಿ, ಪಶುವೈದ್ಯ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಸದಾಶಿವ ಭಟ್ ಕೆ. 5 ಮತ ಪಡೆದು ಸೋಲುಂಡರು.


ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಕುಮಾರ್ ಸಿ. 8 ಮತ ಪಡೆದು ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಆನಂದ ಡಿ. 7 ಮತ ಮತ್ತು ಆರೋಗ್ಯ ಇಲಾಖೆಯ ಸೋಮನಾಥ ಎಂ.ಆರ್ 7 ಮತ ಪಡೆದು ಸೋಲುಂಡರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಾರಾಯಣ ನಾಯ್ಕ ಅವರು ಕಾರ್ಯನಿರ್ವಹಿಸಿದ್ದರು.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya
error: Content is protected !!