24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಸಮಾಜ ಸೇವಕ,ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಆಯ್ಕೆಯಾಗಿದ್ದಾರೆ.

ಜಿ.ಪಂ ಮಾಜಿ ಉಪಾಧ್ಯಕ್ಷ,ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಾಲಕಟ್ಟೆಯಲ್ಲಿ ನ. 17 ರಂದು 40 ನೇ ವರ್ಷದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾವಳಿಯ ಸಭಾ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

ಮೋಹನ್ ಕುಮಾರ್ ಅವರು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮುಖೇನಾ ನೂರಾರು ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಂಡಿದೆ.ಇಂತಹ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

Related posts

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!