33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

ಉಜಿರೆ: ಎಸ್.ಡಿ.ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯು ನ.16 ರಂದು ಉಜಿರೆ ಎಸ್.ಡಿ.ಎಂ ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ನಡೆಯಿತು.

ಕರ್ನಾಟಕ ಹೈ ಕೋರ್ಟ್ ನ್ಯಾಯಾದೀಶರಾದ ರಾಜೇಶ್ ರೈ ಕಲ್ಲಂಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಮೂಲಭೂತ ಕರ್ತವ್ಯವನ್ನು ತಿಳಿದುಕೊಳ್ಳುವಂತಹದ್ದು ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಹದ್ದು ಪ್ರಕೃತ ಸಮಾಜಕ್ಕೆ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ ಬಿ.ಎ. ವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶಚಂದ್ರ ಎಸ್., ಅಧಿವಕ್ತ ಪರಿಷದ್ ದಕ್ಷಿಣ ಪ್ರಾಂತ್ಯದ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ, ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಪುಷ್ಪಲತಾ ಯು.ಕೆ ಉಪಸ್ಥಿತರಿದ್ದರು.

ಹಿರಿಯ ವಕೀಲ ಧನಂಜಯ್ ರಾವ್ ನಿರೂಪಿಸಿದರು. ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಸ್ವಾಗತಿಸಿ, ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕದ ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ಕೈಲರ್ ವಂದಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
error: Content is protected !!