April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಲಾಯಿತು.


ನ.15ರಂದು ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಕುಸುಮಾವತಿ, ಆಶಾಕಾರ್ಯಕರ್ತೆ ವಿನಯ ಆರ್. ಗೌಡ, ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸುಮಿತ್ರ, ಚಿರಂಜೀವಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಕಾನರ್ಪ, ರಾಘವೇಂದ್ರ ಭಟ್, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.


ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ನೀಡಿ ಸಹಕರಿಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ನಡೆಸಿಕೊಟ್ಟರು.
ಅಂಗನವಾಡಿ ಸಹಾಯಕಿ ವಸಂತಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya
error: Content is protected !!