July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಲಾಯಿತು.


ನ.15ರಂದು ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಕುಸುಮಾವತಿ, ಆಶಾಕಾರ್ಯಕರ್ತೆ ವಿನಯ ಆರ್. ಗೌಡ, ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸುಮಿತ್ರ, ಚಿರಂಜೀವಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಕಾನರ್ಪ, ರಾಘವೇಂದ್ರ ಭಟ್, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.


ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ನೀಡಿ ಸಹಕರಿಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ನಡೆಸಿಕೊಟ್ಟರು.
ಅಂಗನವಾಡಿ ಸಹಾಯಕಿ ವಸಂತಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು

Related posts

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!