25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಲಾಯಿತು.


ನ.15ರಂದು ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಕುಸುಮಾವತಿ, ಆಶಾಕಾರ್ಯಕರ್ತೆ ವಿನಯ ಆರ್. ಗೌಡ, ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸುಮಿತ್ರ, ಚಿರಂಜೀವಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಕಾನರ್ಪ, ರಾಘವೇಂದ್ರ ಭಟ್, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.


ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ನೀಡಿ ಸಹಕರಿಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ನಡೆಸಿಕೊಟ್ಟರು.
ಅಂಗನವಾಡಿ ಸಹಾಯಕಿ ವಸಂತಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು

Related posts

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!