25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಲಾಯಿತು.


ನ.15ರಂದು ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಕುಸುಮಾವತಿ, ಆಶಾಕಾರ್ಯಕರ್ತೆ ವಿನಯ ಆರ್. ಗೌಡ, ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸುಮಿತ್ರ, ಚಿರಂಜೀವಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಕಾನರ್ಪ, ರಾಘವೇಂದ್ರ ಭಟ್, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.


ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ನೀಡಿ ಸಹಕರಿಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ನಡೆಸಿಕೊಟ್ಟರು.
ಅಂಗನವಾಡಿ ಸಹಾಯಕಿ ವಸಂತಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು

Related posts

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya
error: Content is protected !!