23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ಜರಗುವ ಉರೂಸ್ ಕಾರ್ಯಕ್ರಮವು ಜಮಾಅತ್ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರ ನಿರ್ದೇಶನದಂತೆ 2025 ಜನವರಿ 14 ರಿಂದ 18 ರವರೆಗೆ ನಡೆಯಲಿರುವುದು.


ಪರಪ್ಪು ಜಮಾಅತ್ ನಲ್ಲಿ ನ.15 ರಂದು ಉರೂಸ್ ಬಾಬ್ತು ನಡೆದ ವಿಶೇಷ ಜಮಾಅತ್ ಸಭೆಯಲ್ಲಿ ಜಮಾಆತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆಯಲ್ಲಿ,ಖತೀಬರಾದ ಎಫ್.ಎಚ್ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ಜಮಾಅತ್ ಪ್ರಧಾನ ಕಾಯದರ್ಶಿ ಅಬ್ದುಲ್ ಕರೀಮ್ ಪ್ರಸ್ತಾವನೆಯಂತೆ ಜಮಾಅತ್ ಆಡಳಿತ ಸಮಿತಿಯ ನಿರ್ದೇಶನದಂತೆ ಉರೂಸ್ ಸಮಿತಿಯನ್ನು ರಚಿಸಲಾಯಿತು.

ಖಾಝಿಯವರ ಅಧಿಕೃತ ಆದೇಶದಂತೆ ಜಮಾಅತ್ ಗೌರವಾದ್ಯಕ್ಷರಾಗಿ ಸೈಯ್ಯದ್ ಜಮಾಲುಲೈಲಿ ಝೈನುಲ್ ಆಬಿದೀನ್ ತಂಙಳ್ ಕಾಜೂರು ರವರನ್ನು ನೇಮಿಸಿದರು.

ಉರೂಸ್ ಸಮಿತಿಯ ಅಧ್ಯಕ್ಷರಾಗಿ ಯುವ ಸಂಘಟಕ ಗೇರುಕಟ್ಟೆಯ ಜಿ.ಡಿ.ಅಶ್ರಫ್,ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ ಎಚ್.ಎಸ್, ಕೋಶಾಧಿಕಾರಿಯಾಗಿ ಹಾಜಿ ಆಸಿಫ್ ಎಸ್.ಯು., ಉಪಾದ್ಯಕ್ಷರಾಗಿ ಅಬ್ದುಲ್ ಬಶೀರ್ ಟಿಂಬರ್,ಇರ್ಫಾನ್ ಎಸ್,ಸಂಚಾಲಕರಾಗಿ ಮಹಮ್ಮದ್ ಹನೀಫ್ ಬಿ.ಐ, ಹಾಜಿ ಬಿ.ಕೆ.ರವೂಫ್,ಸಲಹೆಗಾರರಾಗಿ ಇಕ್ಬಾಲ್ ಸಖಾಫಿ ಮರ್ ಝಾಕಿ,ಅಬೂಬಕ್ಕರ್ ಸಿದ್ದೀಕ್ ಅಝ್ಹರಿ,ಸಿದ್ದೀಕ್ ಜಿ.ಎಚ್, ಜೊತೆ ಕಾರ್ಯದರ್ಶಿಯಾಗಿ ಹಾರಿಶ್ ಎನ್.ಎ,ಅಬೂಬಕ್ಕರ್ ಪಾಲ್ಯ, ರಹಿಮಾನ್ ಜಿ,ಬಶೀರ್ ಎನ್.ಎ,ಮಹಮ್ಮದ್ ಫಯಾಝುದ್ದೀನ್ ಕೆ.ಎಮ್. ಮತ್ತು ಹಾಜರಿದ್ದ ಎಲ್ಲಾ ಜಮಾ ಅತ್ ಸದಸ್ಯರನ್ನು ಸೇರಿಸಿ ಉರೂಸ್ ಸಮಿತಿಯನ್ನು ರಚಿಸಲಾಯಿತು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!