25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟವನ್ನು ನ.16 ರಂದು ಹಮ್ಮಿಕೊಳ್ಳಲಾಯಿತು.


ಕ್ರೀಡಾಕೂಟವನ್ನು ಮುಂಡಾಜೆಯ ಯಂಗ್ ಚಾಲೆಂಜರ್ಸ್ ನ ಸ್ಥಾಪಕ ಅಧ್ಯಕ್ಷ ನಾಮದೇವ್ ಮುಂಡಾಜೆ ರವರು ಕ್ರೀಡಾ ಧ್ವಜಾರೋಹಣ ನೆರವೇರಿಸುವುದರ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ, ಮನೋ ಧೈರ್ಯ, ಶಾರೀರಿಕ ಬೆಳವಣಿಗೆ ಉತ್ತಮಗೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಇಂತಹ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣಗೊಳ್ಳಲು ಸಹಕಾರಿ ಇದ್ದಂತೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕ್ರೀಡಾಕೂಟದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಸುಜಾತಾ ಧನ್ಯವಾದವಿತ್ತರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ಎನ್ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು.

Related posts

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!