September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಂಸ್ಥೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಕೌಶಲ್ಯ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯನ್ನು ಬೆಳ್ತಂಗಡಿ ತಾಲೂಕು ಪಂಚಾಯಿತ್ ನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆಯ ಅಗತ್ಯತೆಯ ಬಗ್ಗೆ ಹಾಗೂ ಈ ತರಬೇತಿಯಿಂದಾಗುವ ಸಕಾರತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದರು. ಶಿಕ್ಷಣ ಫೌಂಡೇಶನ್ ವತಿಯಿಂದ ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಿಗೆ ಅನೇಕ ರೀತಿಯ ಡಿಜಿಟಲ್ ಸಾಧನಗಳನ್ನು ಒದಗಿಸಿದ್ದು, ಅವುಗಳ ಸಹಾಯದಿಂದ ಗ್ರಾಮೀಣ ಭಾಗದ ಸಮುದಾಯದ ಜನರು ಹಾಗೂ ಸ್ವ ಸಹಾಯ ಮಹಿಳೆಯರು ಡಿಜಿಟಲ್ ಸಾಕ್ಷರರಾಗಬೇಕು, ಇದರ ಮೂಲಕ ತಮ್ಮ ದೈನಂದಿನ ಉದ್ಯೋಗ, ವ್ಯವಹಾರಗಳಲ್ಲಿ, ಸದೃಢರಾಗಬೇಕು ಎಂಬ ಕಿವಿಮಾತು ತಿಳಿಸಿದರು.

ಇನ್ನೋರ್ವ ಅತಿಥಿ ಸಹಾಯಕ ನಿರ್ದೇಶಕ ಪ್ರಶಾಂತ್ ಶುಭ ಹಾರೈಸಿದರು. ಶಿಕ್ಷಣ ಫೌಂಡೇಶನ್ ಉಡುಪಿ ಜಿಲ್ಲಾ ಸಂಯೋಜಕರಾದ ರೀನಾ ಹೆಗಡೆಯವರು ಡಿಜಿಟಲ್ ಕೌಶಲ್ಯ ಮತ್ತು ನಾಯಕತ್ವ ತರಬೇತಿಯನ್ನು ನಡೆಸಿಕೊಟ್ಟರು. 42 ಅರಿವು ಕೇಂದ್ರಗಳ ಮೇಲ್ವಿಚಾರಕರು ಈ ತರಬೇತಿಯ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕ ಲವಿಶ್ ನಿರ್ವಹಿಸಿದರು. ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಮೇಲ್ವಿಚಾರಕರಾದ ಶ್ರೀಮತಿ ಡೀಕಯ್ಯ ಗೌಡ ಧನ್ಯವಾದವಿತ್ತರು.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!