23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya
error: Content is protected !!