23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ ಜೈನ್,ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ಸದಸ್ಯರಾಗಿ ಪ್ರದೀಪ್ ಅವರು ಚುನಾಯಿತರಾಗಿದ್ದಾರೆ.

ಬಹಳಷ್ಟು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಈ ಚುನಾವಣೆಯಲ್ಲಿ 22ಮಂದಿ ನಿರ್ದೇಶಕರು ಮತದಾನ ಮಾಡಿದ್ದರು. ಸಂಜೆ ಮತದಾನದ ಬಳಿಕ ಮತ ಏಣಿಕೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ ಜಯರಾಜ್ ಜೈನ್ 17 ಮತಗಳನ್ನು ಪಡೆದು ಚುನಾಯಿತರಾದರು. ಅವರ ಪ್ರತಿಸ್ಪರ್ಧಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳಂಜ ಅವರಿಗೆ 7 ಮತ ದೊರಕಿ ಅವರು ಸೋಲು ಅನುಭವಿಸಿದರು. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲೋಕೋಪಯೋಗಿ ಇಲಾಖೆಯ ನಾರಾಯಣ ಶೆಟ್ಟಿ 17 ಮತ ಪಡೆದು ಆಯ್ಕೆಯಾದರೆ ಅವರ ಎದುರಾಳಿ, ಪಶುವೈದ್ಯ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಸದಾಶಿವ ಭಟ್ ಕೆ. 5 ಮತ ಪಡೆದು ಸೋಲುಂಡರು.


ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಕುಮಾರ್ ಸಿ. 8 ಮತ ಪಡೆದು ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಆನಂದ ಡಿ. 7 ಮತ ಮತ್ತು ಆರೋಗ್ಯ ಇಲಾಖೆಯ ಸೋಮನಾಥ ಎಂ.ಆರ್ 7 ಮತ ಪಡೆದು ಸೋಲುಂಡರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಾರಾಯಣ ನಾಯ್ಕ ಅವರು ಕಾರ್ಯನಿರ್ವಹಿಸಿದ್ದರು.

Related posts

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya
error: Content is protected !!