ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ ಜೈನ್,ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ಸದಸ್ಯರಾಗಿ ಪ್ರದೀಪ್ ಅವರು ಚುನಾಯಿತರಾಗಿದ್ದಾರೆ.

ಬಹಳಷ್ಟು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಈ ಚುನಾವಣೆಯಲ್ಲಿ 22ಮಂದಿ ನಿರ್ದೇಶಕರು ಮತದಾನ ಮಾಡಿದ್ದರು. ಸಂಜೆ ಮತದಾನದ ಬಳಿಕ ಮತ ಏಣಿಕೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ ಜಯರಾಜ್ ಜೈನ್ 17 ಮತಗಳನ್ನು ಪಡೆದು ಚುನಾಯಿತರಾದರು. ಅವರ ಪ್ರತಿಸ್ಪರ್ಧಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳಂಜ ಅವರಿಗೆ 7 ಮತ ದೊರಕಿ ಅವರು ಸೋಲು ಅನುಭವಿಸಿದರು. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲೋಕೋಪಯೋಗಿ ಇಲಾಖೆಯ ನಾರಾಯಣ ಶೆಟ್ಟಿ 17 ಮತ ಪಡೆದು ಆಯ್ಕೆಯಾದರೆ ಅವರ ಎದುರಾಳಿ, ಪಶುವೈದ್ಯ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಸದಾಶಿವ ಭಟ್ ಕೆ. 5 ಮತ ಪಡೆದು ಸೋಲುಂಡರು.


ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಕುಮಾರ್ ಸಿ. 8 ಮತ ಪಡೆದು ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಆನಂದ ಡಿ. 7 ಮತ ಮತ್ತು ಆರೋಗ್ಯ ಇಲಾಖೆಯ ಸೋಮನಾಥ ಎಂ.ಆರ್ 7 ಮತ ಪಡೆದು ಸೋಲುಂಡರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಾರಾಯಣ ನಾಯ್ಕ ಅವರು ಕಾರ್ಯನಿರ್ವಹಿಸಿದ್ದರು.

Related posts

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!