23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಲಾಯಿತು.


ನ.15ರಂದು ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಕುಸುಮಾವತಿ, ಆಶಾಕಾರ್ಯಕರ್ತೆ ವಿನಯ ಆರ್. ಗೌಡ, ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸುಮಿತ್ರ, ಚಿರಂಜೀವಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಕಾನರ್ಪ, ರಾಘವೇಂದ್ರ ಭಟ್, ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.


ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ನೀಡಿ ಸಹಕರಿಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಪೂರ್ಣಿಮಾ ದಿನೇಶ್ ನಡೆಸಿಕೊಟ್ಟರು.
ಅಂಗನವಾಡಿ ಸಹಾಯಕಿ ವಸಂತಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು

Related posts

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya
error: Content is protected !!