23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ಜರಗುವ ಉರೂಸ್ ಕಾರ್ಯಕ್ರಮವು ಜಮಾಅತ್ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರ ನಿರ್ದೇಶನದಂತೆ 2025 ಜನವರಿ 14 ರಿಂದ 18 ರವರೆಗೆ ನಡೆಯಲಿರುವುದು.


ಪರಪ್ಪು ಜಮಾಅತ್ ನಲ್ಲಿ ನ.15 ರಂದು ಉರೂಸ್ ಬಾಬ್ತು ನಡೆದ ವಿಶೇಷ ಜಮಾಅತ್ ಸಭೆಯಲ್ಲಿ ಜಮಾಆತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆಯಲ್ಲಿ,ಖತೀಬರಾದ ಎಫ್.ಎಚ್ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ಜಮಾಅತ್ ಪ್ರಧಾನ ಕಾಯದರ್ಶಿ ಅಬ್ದುಲ್ ಕರೀಮ್ ಪ್ರಸ್ತಾವನೆಯಂತೆ ಜಮಾಅತ್ ಆಡಳಿತ ಸಮಿತಿಯ ನಿರ್ದೇಶನದಂತೆ ಉರೂಸ್ ಸಮಿತಿಯನ್ನು ರಚಿಸಲಾಯಿತು.

ಖಾಝಿಯವರ ಅಧಿಕೃತ ಆದೇಶದಂತೆ ಜಮಾಅತ್ ಗೌರವಾದ್ಯಕ್ಷರಾಗಿ ಸೈಯ್ಯದ್ ಜಮಾಲುಲೈಲಿ ಝೈನುಲ್ ಆಬಿದೀನ್ ತಂಙಳ್ ಕಾಜೂರು ರವರನ್ನು ನೇಮಿಸಿದರು.

ಉರೂಸ್ ಸಮಿತಿಯ ಅಧ್ಯಕ್ಷರಾಗಿ ಯುವ ಸಂಘಟಕ ಗೇರುಕಟ್ಟೆಯ ಜಿ.ಡಿ.ಅಶ್ರಫ್,ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ ಎಚ್.ಎಸ್, ಕೋಶಾಧಿಕಾರಿಯಾಗಿ ಹಾಜಿ ಆಸಿಫ್ ಎಸ್.ಯು., ಉಪಾದ್ಯಕ್ಷರಾಗಿ ಅಬ್ದುಲ್ ಬಶೀರ್ ಟಿಂಬರ್,ಇರ್ಫಾನ್ ಎಸ್,ಸಂಚಾಲಕರಾಗಿ ಮಹಮ್ಮದ್ ಹನೀಫ್ ಬಿ.ಐ, ಹಾಜಿ ಬಿ.ಕೆ.ರವೂಫ್,ಸಲಹೆಗಾರರಾಗಿ ಇಕ್ಬಾಲ್ ಸಖಾಫಿ ಮರ್ ಝಾಕಿ,ಅಬೂಬಕ್ಕರ್ ಸಿದ್ದೀಕ್ ಅಝ್ಹರಿ,ಸಿದ್ದೀಕ್ ಜಿ.ಎಚ್, ಜೊತೆ ಕಾರ್ಯದರ್ಶಿಯಾಗಿ ಹಾರಿಶ್ ಎನ್.ಎ,ಅಬೂಬಕ್ಕರ್ ಪಾಲ್ಯ, ರಹಿಮಾನ್ ಜಿ,ಬಶೀರ್ ಎನ್.ಎ,ಮಹಮ್ಮದ್ ಫಯಾಝುದ್ದೀನ್ ಕೆ.ಎಮ್. ಮತ್ತು ಹಾಜರಿದ್ದ ಎಲ್ಲಾ ಜಮಾ ಅತ್ ಸದಸ್ಯರನ್ನು ಸೇರಿಸಿ ಉರೂಸ್ ಸಮಿತಿಯನ್ನು ರಚಿಸಲಾಯಿತು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya
error: Content is protected !!