September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ಜರಗುವ ಉರೂಸ್ ಕಾರ್ಯಕ್ರಮವು ಜಮಾಅತ್ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರ ನಿರ್ದೇಶನದಂತೆ 2025 ಜನವರಿ 14 ರಿಂದ 18 ರವರೆಗೆ ನಡೆಯಲಿರುವುದು.


ಪರಪ್ಪು ಜಮಾಅತ್ ನಲ್ಲಿ ನ.15 ರಂದು ಉರೂಸ್ ಬಾಬ್ತು ನಡೆದ ವಿಶೇಷ ಜಮಾಅತ್ ಸಭೆಯಲ್ಲಿ ಜಮಾಆತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆಯಲ್ಲಿ,ಖತೀಬರಾದ ಎಫ್.ಎಚ್ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ಜಮಾಅತ್ ಪ್ರಧಾನ ಕಾಯದರ್ಶಿ ಅಬ್ದುಲ್ ಕರೀಮ್ ಪ್ರಸ್ತಾವನೆಯಂತೆ ಜಮಾಅತ್ ಆಡಳಿತ ಸಮಿತಿಯ ನಿರ್ದೇಶನದಂತೆ ಉರೂಸ್ ಸಮಿತಿಯನ್ನು ರಚಿಸಲಾಯಿತು.

ಖಾಝಿಯವರ ಅಧಿಕೃತ ಆದೇಶದಂತೆ ಜಮಾಅತ್ ಗೌರವಾದ್ಯಕ್ಷರಾಗಿ ಸೈಯ್ಯದ್ ಜಮಾಲುಲೈಲಿ ಝೈನುಲ್ ಆಬಿದೀನ್ ತಂಙಳ್ ಕಾಜೂರು ರವರನ್ನು ನೇಮಿಸಿದರು.

ಉರೂಸ್ ಸಮಿತಿಯ ಅಧ್ಯಕ್ಷರಾಗಿ ಯುವ ಸಂಘಟಕ ಗೇರುಕಟ್ಟೆಯ ಜಿ.ಡಿ.ಅಶ್ರಫ್,ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ ಎಚ್.ಎಸ್, ಕೋಶಾಧಿಕಾರಿಯಾಗಿ ಹಾಜಿ ಆಸಿಫ್ ಎಸ್.ಯು., ಉಪಾದ್ಯಕ್ಷರಾಗಿ ಅಬ್ದುಲ್ ಬಶೀರ್ ಟಿಂಬರ್,ಇರ್ಫಾನ್ ಎಸ್,ಸಂಚಾಲಕರಾಗಿ ಮಹಮ್ಮದ್ ಹನೀಫ್ ಬಿ.ಐ, ಹಾಜಿ ಬಿ.ಕೆ.ರವೂಫ್,ಸಲಹೆಗಾರರಾಗಿ ಇಕ್ಬಾಲ್ ಸಖಾಫಿ ಮರ್ ಝಾಕಿ,ಅಬೂಬಕ್ಕರ್ ಸಿದ್ದೀಕ್ ಅಝ್ಹರಿ,ಸಿದ್ದೀಕ್ ಜಿ.ಎಚ್, ಜೊತೆ ಕಾರ್ಯದರ್ಶಿಯಾಗಿ ಹಾರಿಶ್ ಎನ್.ಎ,ಅಬೂಬಕ್ಕರ್ ಪಾಲ್ಯ, ರಹಿಮಾನ್ ಜಿ,ಬಶೀರ್ ಎನ್.ಎ,ಮಹಮ್ಮದ್ ಫಯಾಝುದ್ದೀನ್ ಕೆ.ಎಮ್. ಮತ್ತು ಹಾಜರಿದ್ದ ಎಲ್ಲಾ ಜಮಾ ಅತ್ ಸದಸ್ಯರನ್ನು ಸೇರಿಸಿ ಉರೂಸ್ ಸಮಿತಿಯನ್ನು ರಚಿಸಲಾಯಿತು.

Related posts

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya
error: Content is protected !!